ಪುತ್ತೂರು: ಮಕ್ಕಳ ಗ್ರಾಮಸಭೆಯನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ಪೂರ್ವಭಾವಿ ಸಭೆಯು ಜೂ.೨೮ ರಂದು ಒಳಮೊಗ್ರು ಗ್ರಾಪಂ ಸಭಾಂಗಣದಲ್ಲಿ ನಡೆಯಿತು.ಮಕ್ಕಳ ಹಕ್ಕುಗಳ ಸಂಸ್ಥೆಯ ತಾಲೂಕು ಕಾರ್ಯಕ್ರಮ ಸಂಯೋಜಕಿ ರಮ್ಯ ಗೌಡರವರು ಮಾಹಿತಿ ನೀಡುತ್ತಾ, ಮಕ್ಕಳ ಗ್ರಾಮಸಭೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವಲ್ಲಿ ಪ್ರಯತ್ನ ಮಾಡಬೇಕು, ಮಕ್ಕಳು ತಮ್ಮ ವೈಯುಕ್ತಿಕ ಸಮಸ್ಯೆಗಳನ್ನು ಕೂಡ ಸಭೆಯಲ್ಲಿ ಹೇಳಿಕೊಳ್ಳುವ ರೀತಿಯಲ್ಲಿ ಸಭೆಯನ್ನು ನಡೆಸಬೇಕು, ಕೇವಲ ಶಾಲಾ ಸಮಸ್ಯೆ ಮಾತ್ರವಲ್ಲದೆ ತಮ್ಮ ಸಮಸ್ಯೆಗಳ ಬಗ್ಗೆಯೂ ಮಕ್ಕಳು ಗ್ರಾಮಸಭೆಯಲ್ಲಿ ಹೇಳಿಕೊಳ್ಳಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಸದಸ್ಯರುಗಳಾದ ಶೀನಪ್ಪ ನಾಯ್ಕ, ಅಶ್ರಫ್ ಉಜಿರೋಡಿ, ವಿನೋದ್ ಶೆಟ್ಟಿ, ಸಿರಾಜುದ್ದೀನ್, ಚಿತ್ರಾ ಬಿ.ಸಿ, ಶಾರದಾ, ನಳಿನಾಕ್ಷಿ, ರೇಖಾ, ವನಿತಾ ಕುಮಾರಿ, ಪ್ರದೀಪ್, ಲತೀಫ್, ಮಹೇಶ್ ಕೇರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್ ಸ್ವಾಗತಿಸಿ, ಕಾರ್ಯದರ್ಶಿ ಜಯಂತಿ ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.