ಪುತ್ತೂರು: ನವೋದಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ನರಿಮೊಗರು ಹಾಗೂ ಶಾಂತಿಗೋಡು ಗ್ರಾಮಗಳ ನವೋದಯ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಜೂ.28ರಂದು ನಡೆಯಿತು.
ನರಿಮೊಗರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ನ ಪ್ರತಿನಿಧಿ ವಸಂತ್, ನವೋದಯ ಚಾರಿಟೇಬಲ್ ಟ್ರಸ್ಟ್ ಪುತ್ತೂರು ತಾಲೂಕು ಉಸ್ತುವಾರಿ ಚಂದ್ರಶೇಖರ್, ನರಿಮೊಗರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ನಿರ್ದೇಶಕರಾದ ಕುಶಾಲಪ್ಪ ಗೌಡ ಹಾಗೂ ಶಿವರಾಮ, ನವೋದಯ ಸಂಘದ ಪ್ರೇರಕಿ ಕುಸುಮಾವತಿ ಉಪಸ್ಥಿತರಿದ್ದರು.