ಡಾಕ್ಟರ್ಸ್ ಡೇ ಪ್ರಶಸ್ತಿಗೆ ಆಯ್ಕೆಯಾದ ಡಾ.ಎಂ ಕೆ.ಪ್ರಸಾದ್ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಅಭಿನಂದನೆ

0


ಪುತ್ತೂರು: ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(ಐ ಎಮ್ ಎ) ವೈದ್ಯರ ದಿನದ ಪ್ರಶಸ್ತಿಗೆ ಆಯ್ಕೆಯಾದ ಪುತ್ತೂರು ಆದರ್ಶ ಆಸ್ಪತ್ರೆಯ ಡಾ.ಎಂ ಕೆ ಪ್ರಸಾದ್ ಭಂಡಾರಿಯವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ‌.ಜಿ.ಜಗನ್ನಿವಾಸ ರಾವ್,ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭಾ ಸದಸ್ಯ ಪ್ರೇಮ್ ಕುಮಾರ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಎಸ್ ಶೆಟ್ಟಿ, ತಾ.ಪಂ ಮಾಜಿ ಸದಸ್ಯೆ ದಿವ್ಯಾ ಪುರುಷೋತ್ತಮ್, ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ರಾಮದಾಸ್ ಹಾರಾಡಿ, ವಿಶ್ವನಾಥ ಕುಲಾಲ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here