- ಅಧ್ಯಕ್ಷ: ಮಂಜುನಾಥ್ ದುಗ್ಗಳ, ಕಾರ್ಯದರ್ಶಿ: ಶ್ರೀನಿವಾಸ ಕೊಂರ್ಬಡ್ಕ-ದೊಡ್ಡಮನೆ, ಖಜಾಂಜಿ: ಪ್ರವೀಣ್ ಗೋಳಿತ್ತಡ್ಕ
ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಶ್ರೀಷಣ್ಮುಖದೇವ ಭಜನಾ ಮಂಡಳಿ ಮತ್ತು ಯಕ್ಷಗಾನ ಕಲಾಕೂಟ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜೂ.26ರಂದು ಪೆರ್ಲಂಪಾಡಿ ಶ್ರೀಷಣ್ಮುಖದೇವ ಭಜನಾ ಮಂದಿರದಲ್ಲಿ ಶ್ರೀಷಣ್ಮುಖದೇವ ಭಜನಾ ಮಂಡಳಿ ಮತ್ತು ಯಕ್ಷಗಾನ ಕಲಾಕೂಟದ ಅಧ್ಯಕ್ಷ ಜಯಪ್ರಕಾಶ್ ಕೊಂರ್ಬಡ್ಕ-ದೊಡ್ಡಮನೆರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಮಂಜುನಾಥ್ ದುಗ್ಗಳ, ಕಾರ್ಯದರ್ಶಿಯಾಗಿ ಶ್ರೀನಿವಾಸ ಕೊಂರ್ಬಡ್ಕ ದೊಡ್ಡಮನೆ ಹಾಗೂ ಖಜಾಂಜಿಯಾಗಿ ಪ್ರವೀಣ್ ಗೋಳಿತ್ತಡ್ಕರವರನ್ನು ಆಯ್ಕೆ ಮಾಡಿ ನೂತನ ಸಮಿತಿ ರಚನೆ ಮಾಡಲಾಯಿತು. ನಂತರ ನೂತನ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.
ಶ್ರೀಷಣ್ಮುಖದೇವ ಭಜನಾ ಮಂಡಳಿ ಮತ್ತು ಯಕ್ಷಗಾನ ಕಲಾಕೂಟ ಪೆರ್ಲಂಪಾಡಿ ಇದರ ಮಾಜಿ ಪದಾಧಿಕಾರಿಗಳು, ಹಿರಿಯರು, ಪ್ರಮುಖರು ಪಾಲ್ಗೊಂಡಿದ್ದರು.