ಪುತ್ತೂರು: ಇಲ್ಲಿನ ಅಬ್ಸಲ್ಯೂಟ್ ಲರ್ನಿಂಗ್ ಅಕಾಡೆಮಿ ವತಿಯಿಂದ ಒಂದು ದಿನದ ಉಚಿತ ಸಿಇಟಿ, ಜೆಇಇ, ನೀಟ್ ಕಾರ್ಯಾಗಾರ ಜೂ.26ರಂದು ಜರಗಿತು.
ಕಾರ್ಯಕ್ರಮವನ್ನು ಅಳಿಕೆ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ರಾಸಾಯನಶಾಸ್ತ್ರ ಉಪನ್ಯಾಸಕ ಪ್ರಮೋದ್ ಎಚ್. ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಅವಶ್ಯಕವಾಗಿದೆ ಎಂದರು. ಸಂಸ್ಥೆಯ ನಿರ್ದೇಶಕರಾದ ವಿಘ್ನೇಶ್ ಎಚ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಶರತ್ ಎನ್.ಕೆ. ಉಪಸ್ಥಿತರಿದ್ದರು. ಉಪನ್ಯಾಸಕಿ ಕುಮಾರಿ ಜಯಂತಿ ಎ.ಕೆ. ಕಾರ್ಯಕ್ರಮ ನಿರೂಪಿಸಿದರು.