ಪುತ್ತೂರು2017ರಲ್ಲಿ ಸುಳ್ಯದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವೊಂದರ ಆರೋಪಿಯನ್ನು ಪುತ್ತೂರು ಜಿಲ್ಲಾ ನ್ಯಾಯಾಲಯ ದೋಷಮುಕ್ತಗೊಳಿಸಿದೆ. 2017ರಲ್ಲಿ ಸುಳ್ಯದ ಮಾವಿನಪಳಿಕೆ ಎಂಬಲ್ಲಿ ಎಸ್ಸಿ ಎಸ್ಟಿ ಕಾಲನಿಯಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಒಡೆದು ಸ್ಥಳೀಯ ನಾಯಕರಿಗೆ ಅವಾಚ್ಯವಾಗಿ ಬೈದು ಜಾತಿ ನಿಂದನೆ ಮಾಡಿ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಇಲ್ಯಾಸ್ ಎಂಬವರ ವಿರುದ್ಧ ಸುಳ್ಯ ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ.ಆರೋಪಿ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಸಲೀನಾ ನೆಕ್ಕಿಲಾಡಿ ವಾದಿಸಿದ್ದರು