ಶಿರಾಡಿ: ಕೆಎಸ್‌ಆರ್‌ಟಿಸಿ ಬಸ್ಸು-ಗೂಡ್ಸ್ ಲಾರಿ ಡಿಕ್ಕಿ, ಓರ್ವನಿಗೆ ಗಾಯ

0

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಗ್ರಾಮದ ಬರ್ಚನಹಳ್ಳ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಗೂಡ್ಸ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಪ್ರಯಾಣಿಕ ಗಾಯಗೊಂಡಿರುವ ಘಟನೆ ಜೂ.28ರಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು(ಕೆಎ18 ಎಫ್ 0918) ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಗೂಡ್ಸ್ ಲಾರಿ(ಕೆಎ 52 ಎ 4142)ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ವಾಹನಗಳೆರಡು ಜಖಂಗೊಂಡಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕ ಶ್ರೀಕಾಂತ ಎಂಬವರ ಕಣ್ಣು ಮತ್ತು ಕಾಲಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಲಾರಿ ಚಾಲಕ ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ರಸ್ತೆಯ ತಪ್ಪು ಬದಿಯಾದ ಬಲಬದಿಗೆ ಲಾರಿ ಚಲಾಯಿಸಿಕೊಂಡು ಬಂದು ಬಸ್ಸಿಗೆ ಡಿಕ್ಕಿ ಹೊಡೆದಿರುವುದಾಗಿ ಬಸ್ಸು ಚಾಲಕ ಬಾಗಲಕೋಟೆಯ ಬಸವರಾಜ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here