ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪೂರ್ವಭಾವಿಯಾಗಿ ಜರಗುವ ವಿವಿಧ ಪರಿಹಾರ ಕಾರ್ಯಕ್ರಮಗಳ ಅಂಗವಾಗಿ ಮುಷ್ಠಿ ಕಾಣಿಕೆ ಸಮರ್ಪಣೆ ಹಾಗೂ ಅನುಜ್ಞಾ ಕಲಶ ಜೂ.30 ಮತ್ತು ಜು.1ರಂದು ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನ ಜರಗಿತು. ಆಡಳಿತ ಮೊಕ್ತೇಸರ ಯು.ಜಿ.ರಾಧಾ, ಪ್ರಧಾನ ಅರ್ಚಕ ನಾಗರಾಜ ಭಟ್ ಕುಕ್ಕಿಲ, ಬೈಲುವಾರು ಸಮಿತಿಯವರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.