ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಬಕ ವಲಯದ ಎನ್ಎಸ್ಯುಐ ಅಧ್ಯಕ್ಷರಾಗಿ ಫಯಾಜ್ ಪೋಳ್ಯರವರನ್ನು ಆಯ್ಕೆ ಮಾಡಲಾಯಿತು. ಕಬಕದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಎನ್ಎಸ್ಯುಐ ತಾಲೂಕು ಅಧ್ಯಕ್ಷ ಚಿರಾಗ್ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಆದಂ ಕೆದುವಡ್ಕ, ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ಯುಐ ಪ್ರಧಾನ ಕಾರ್ಯದರ್ಶಿ ಬಾತೀಷ್ ಅಳಕೆಮಜಲು, ಎಡ್ವರ್ಡ್ ಡಿಸೋಜಾ, ಸುಹೈಲ್, ಪ್ರಮೋದ್, ಜವಾದ್ ಕುಂಬ್ರ ಹಾಗೂ ತಾಲೂಕು ಸಮಿತಿ ಸದಸ್ಯರು ಮತ್ತು ಕಬಕ ವಲಯದ ಕಾರ್ಯಕರ್ತರು ಉಪಸ್ಥಿತರಿದ್ದರು. ನೂತನ ಕಬಕ ವಲಯ ಅದ್ಯಕ್ಷರಾಗಿ ಫಯಾಜ್ ಪೋಲ್ಯ ಆಯ್ಕೆಯಾದರು.