ಟೈಲರ್ ಕನ್ನಯ್ಯ ಲಾಲ್ ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಟೈಲರ್ ಅಸೋಶಿಯೇಷನ್ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

0

 

ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಅವರ ಹತ್ಯೆಯನ್ನು ಖಂಡಿಸಿ, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ, ಕರ್ನಾಟಕ ಸ್ಟೇಟ್ ಟೈಲರ್ ಅಸೋಶಿಯೇಷನ್ ದ. ಕ. ಜಿಲ್ಲಾ ಸಮಿತಿ ವತಿಯಿಂದ ಜು.2ರಂದು ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಟೈಲರ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ನಾರಾಯಣ ಬಿ.ಎ., ಜಿಲ್ಲಾಧ್ಯಕ್ಷ ಜಯಂತ್ ಕೆ. ಉರ್ಲಾಂಡಿ, ಜಿಲ್ಲಾ ಉಪಾಧ್ಯಕ್ಷರಾದ ಚಕ್ರೇಶ್ ಅಮೀನ್, ಕೇಶವ ಕದ್ರಿ ಹಾಗೂ ಮಂಗಳೂರು, ಉಳ್ಳಾಲ, ಮೂಲ್ಕಿ, ಮೂಡಬಿದ್ರೆ ಕ್ಷೇತ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕೋಶಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here