ಗೋಳಿತ್ತೊಟ್ಟು ಗ್ರಾ.ಪಂ.: ವಸತಿ ನಿರ್ಮಾಣದ ಮಾಹಿತಿ ಕಾರ್ಯಕ್ರಮ

0

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾ.ಪಂ.ನಲ್ಲಿ 2021-2022ನೇ ಸಾಲಿನ ಬಸವ ವಸತಿ ಹಾಗೂ ಅಂಬೇಡ್ಕರ್ ಯೋಜನೆಯ ಫಲಾನುಭವಿಗಳಿಗೆ ವಸತಿ ನಿರ್ಮಾಣದ ಬಗ್ಗೆ ಮಾಹಿತಿ ಕಾರ್ಯಕ್ರಮ ಜೂ.21ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷ ಜನಾರ್ದನ ಪಟೇರಿಯವರು ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಜಗದೀಶ್ ನಾಯ್ಕ್‌ರವರು ವಸತಿ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಭರಮಣ್ಣರವರು ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ಶೋಭಾಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯರಾದ ಶಿವಪ್ರಸಾದ್, ಬಾಬು ಪೂಜಾರಿ ಕಿನ್ಯಡ್ಕ, ಪದ್ಮನಾಭ, ಗುಲಾಬಿ, ಸವಿತಾ, ಶೃತಿ, ಜಾನಕಿ, ನೋಣಯ್ಯ ಗೌಡ, ವಿ.ಸಿ.ಜೋಸೆಫ್, ಪ್ರಜಲ, ಸಂಧ್ಯಾ, ವಾರಿಜಾಕ್ಷಿ, ಜೀವಿತಾ, ಬಾಲಕೃಷ್ಣ ಅಲೆಕ್ಕಿ, ಹೇಮಲತಾ ಉಪಸ್ಥಿತರಿದ್ದರು. ಕಾರ್ಯದರ್ಶಿ ಚಂದ್ರಾವತಿ ವಂದಿಸಿದರು. ಸಿಬ್ಬಂದಿಗಳಾದ ಬಾಬು ನಾಯ್ಕ್, ಪುಷ್ಪಾಜಯಂತ್, ಯಶವಂತ, ದಿನೇಶ್, ಕೀರ್ತಿಕಾ ಸಹಕರಿಸಿದರು.

LEAVE A REPLY

Please enter your comment!
Please enter your name here