ಸವಣೂರಿನ ವಾಸುದೇವ ಇಡ್ಯಾಡಿ ಅವರಿಗೆ ಯದುಕುಲ ರತ್ನ ಪ್ರಶಸ್ತಿ ಪ್ರದಾನ

0

 ಸವಣೂರು :ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದ ಬಳಿಯಿರುವ ಸಭಾಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ 15ನೇ ವಾರ್ಷಿ ಮಹಾಸಭೆಯಲ್ಲಿ ವೈದ್ಯರತ್ನ ಪ್ರಶಸ್ತಿ ಪುರಸ್ಕೃತ ಸವಣೂರಿನ ವಾಸುದೇವ ಇಡ್ಯಾಡಿ ಅವರಿಗೆ ಯದುಕುಲ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಈ ಸಂದರ್ಭ ಕಾರ್ನಾಟಕ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು,ದ.ಕ.ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್‌ ,ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯಸಂರಕ್ಷಾಣಾಧಿಕಾರಿ ಡಾ.ದಿನೇಶ್‌ ಕುಮಾರ್‌ ,ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ಅಧ್ಯಕ್ಷ ಟಿ.ಆರ್.ಕುಮಾರಸ್ವಾಮಿ,ಕಾರ್ಯಾಧ್ಯಕ್ಷ ಅನಂತಕೃಷ್ಣ ವಿ.,ಕಾರ್ಯದರ್ಶಿ ಕೃಷ್ಣಯ್ಯ,ಕೋಶಾಧಿಕಾರಿ ಯು.ಅನಿಲ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here