ಕುಂಬ್ರದಲ್ಲಿ ಬೈಕ್, ಮಾರುತಿ ಓಮ್ನಿ ಡಿಕ್ಕಿ – ಗಾಯಾಳು ಪಂಜಿಗುಡ್ಡೆ ನಿವಾಸಿ ಮೃತ್ಯು

0

 

ಗಾಯಾಳು ಬೈಕ್ ಸವಾರರನ್ನು ಆಸ್ಪತ್ರೆಗೆ ಕರೆದೊಯ್ಯಲು ಚಿತ್ರ ನಟ ಸುಂದರ ರೈ ಮಂದಾರ

ಪುತ್ತೂರು: ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕುಂಬ್ರದಲ್ಲಿ ಜು.3 ರ ರಾತ್ರಿ ನಡೆದಿದ್ದು ತೀವ್ರ ಗಾಯಗೊಂಡಿದ್ದ ಬೈಕ್ ನಲ್ಲಿದ್ದ ಕುಂಬ್ರ ಪಂಜಿಗುಡ್ಡೆ ನಿವಾಸಿ ರಘುನಾಥ ಶೆಟ್ಟಿ ಎಂಬವರು ಮೃತಪಟ್ಟಿದ್ದಾರೆ.
ರಘುರಾಮ ಶೆಟ್ಟಿಯವರು ತನ್ನ ಮಗನನ್ನು ಬೆಂಗಳೂರು ಬಸ್ ಗೆ ಬಿಡಲು ಪುತ್ತೂರಿಗೆ ಮನೆಯಿಂದ ಬೈಕ್ ನಲ್ಲಿ ಬರುತ್ತಿದ್ದ ವೇಳೆ ವಿರುದ್ಧ ಡಿಕ್ಕಿನಿಂದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಎಂಬವರು ಚಲಾಯಿಸುತ್ತಿದ್ದ ಮಾರುತಿ ಓಮ್ನಿಗೆ ನಡುವೆ ತಿಂಗಳಾಡಿ ರಸ್ತೆಯ ಕುಂಬ್ರ ಸಮೀಪ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಘುನಾಥ ಶೆಟ್ಟಿ ಮತ್ತು ಸಹ ಸವಾರ ಅವರ ಪುತ್ರ ಗಂಭೀರ ಗಾಯಗೊಂಡಿದ್ದರು. ಇದೇ ವೇಳೆ ಸ್ಥಳಿಯರಾದ ಚಿತ್ರ ನಟ ಸುಂದರ ರೈ ಮಂದಾರ ಅವರು ತಮ್ಮ ಸ್ನೇಹಿತರ ಜೊತೆ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರೂ ದಾರಿ ಮಧ್ಯೆ ರಘುರಾಮ ಶೆಟ್ಟಿ ಅವರು ಮೃತಪಟ್ಟಿದ್ದಾರೆ. ರಘುರಾಮ ಶೆಟ್ಟಿಯವರ ಪುತ್ರನ ಕಾಲು ಮುರಿತಕ್ಕೊಳಗಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here