ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ಗ್ರಾಮೋತ್ಸವದ ಅಂಗವಾಗಿ ’ಕೆಸರ್ ದ ಕಂಡೊಡೊಂಜಿ ದಿನ’ ಕಾರ್ಯಕ್ರಮ

0

ಮಣ್ಣು ಸಂಸ್ಕೃತಿಯ ಮೊದಲ ಭಾಗ: ಒಡಿಯೂರು ಶ್ರೀ

ವಿಟ್ಲ:ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿಯ ವತಿಯಿಂದ ಆ.8ರಂದು ನಡೆಯಲಿರುವ ಜನ್ಮದಿನೋತ್ಸವ – ಗ್ರಾಮೋತ್ಸವ- ಗುರುವಂದನೆ ಕಾರ್ಯಕ್ರಮದ ಅಂಗವಾಗಿ ಜು.3ರಂದು ಬನಾರಿಯಲ್ಲಿರುವ ಶ್ರೀ ಸಂಸ್ಥಾನದ ಕೃಷಿಭೂಮಿಯಲ್ಲಿ ನಡೆದ ’ಕೆಸರ್ ದ ಕಂಡೊಡೊಂಜಿ ದಿನ’ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಉದ್ಘಾಟಿಸಿದರು.

ಬಳಿಕ ಆಶೀರ್ವಚನ ನೀಡಿದ ಅವರು ಮಣ್ಣು ಸಂಸ್ಕೃತಿಯ ಮೊದಲ ಭಾಗವಾಗಿದ್ದು, ಪ್ರಕೃತಿ ಸಂರಕ್ಷಣೆಯ ಕಾರ್ಯ ಎಲ್ಲರಿಂದಲೂ ಆಗಬೇಕು. ಧರ್ಮ ಸಂರಕ್ಷಣೆಯ ವಿಚಾರದಲ್ಲಿ ಪ್ರತಿಯೊಬ್ಬರ ಪಾತ್ರ ಮುಖ್ಯವಾಗಿದೆ. ಯುವ ಸಮೂಹ ಇಂತಹ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಸಾಧ್ವಿ ಮಾತಾನಂದಮಯಿ, ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ, ಕಾರ್ಯಾಧ್ಯಕ್ಷ ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು, ಕೋಶಾಧಿಕಾರಿಗಳಾದ ಎ. ಸುರೇಶ್ ರೈ, ಎ. ಅಶೋಕ್ ಕುಮಾರ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಕನ್ಯಾನ ಹಾಗೂ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಕೆ. ಪಿ. ರಘುರಾಮ ಶೆಟ್ಟಿ, ರಘುನಾಥ ಶೆಟ್ಟಿ ಪಟ್ಲಗುತ್ತು, ಕ್ರೀಡೋತ್ಸವ ಸಮಿತಿ ಸಂಚಾಲಕ ಕಿರಣ್ ಕುಮಾರ್, ಧರ್ಮ ಪ್ರಸಾದ್ ರೈ ಉಪಸ್ಥಿತರಿದ್ದರು.

ರಿಷಿಕಾ, ಸೌಜನ್ಯ, ವಿಶುದ್ಥಿ, ಶಮಾ ಪ್ರಾರ್ಥಿಸಿದರು. ಯಶವಂತ ವಿಟ್ಲ ಸ್ವಾಗತಿಸಿದರು. ಮಾತೇಶ್ ಭಂಡಾರಿ ವಂದಿಸಿದರು. ವಿಜೇತ್ ರೈ ಅಂಕತಡ್ಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here