ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ; ಜು.5- ದ.ಕ.ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಕಡಬ ತಾಲೂಕು ಕಛೇರಿಯಲ್ಲಿ

0

ಕಡಬ: ಇಲ್ಲಿನ ತಾಲೂಕು ಕಚೇರಿಯಲ್ಲಿ ಜು.5ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಲಭ್ಯವಿರಲಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳ ಬಗ್ಗೆ ದೂರು, ಅಭಿಪ್ರಾಯಗಳನ್ನು ನೀಡಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಜಿಲ್ಲಾಧಿಕಾರಿಯವರು ಪ್ರತೀ ತಿಂಗಳ ಮಂಗಳವಾರ ತಾಲೂಕು ಕಚೇರಿಯಲ್ಲಿ ಲಭ್ಯರಿದ್ದು, ಜನಸಾಮಾನ್ಯರ ಕುಂದುಕೊರತೆಗಳನ್ನು ಬಗೆಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.

LEAVE A REPLY

Please enter your comment!
Please enter your name here