ಹಿರೇಬಂಡಾಡಿ : ಬಿಲ್ಲವ ಗ್ರಾಮ ಸಮಿತಿ ಹಾಗೂ ಬಿಲ್ಲವ ಮಹಿಳಾ ಗ್ರಾಮ ಸಮಿತಿ, ಹಿರೇಬಂಡಾಡಿ ಇದರ ಜುಲೈ ತಿಂಗಳ ಮಾಸಿಕ ಸಭೆಯು ಜು.3ರಂದು ಗುರುಶ್ರೀ ಸಮುದಾಯ ಭವನದಲ್ಲಿ ನಡೆಯಿತು.
ಗುರುಗಳ ಸ್ತೋತ್ರದೊಂದಿಗೆ ಸಭೆ ಆರಂಭವಾಯಿತು. ಗ್ರಾಮ ಪಂಚಾಯತ್ ಸದಸ್ಯೆ ನಳನಾಕ್ಷಿಯವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಸಮಿತಿ ಅಧ್ಯಕ್ಷ ವಸಂತ ಕಜೆ ಎಲ್ಲರನ್ನೂ ಸ್ವಾಗತಿಸಿದರು. ಸಭೆಯಲ್ಲಿ ಗ್ರಾಮ ಸಮಿತಿಯ ಮೂಲಕ ಕೈಗೊಳ್ಳುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಉಪ್ಪಿನಂಗಡಿ ವಲಯ ಸಂಚಾಲಕರಾದ ಅಶೋಕ್ ಕುಮಾರ್ ಪಡ್ಪು ವಿದ್ಯಾರ್ಥಿಗಳು ಹಾಗೂ ಸಮಾಜ ಬಾಂಧವರನ್ನು ಉದ್ದೇಶಿಸಿ ಮಾತನಾಡಿದರು. ತಾಲ್ಲೂಕು ಬಿಲ್ಲವ ಸಂಘದಲ್ಲಿ ಮಹಿಳಾ ವೇದಿಕೆಯ ವತಿಯಿಂದ ನಡೆಯಲಿರುವ ಆಟಿದ ಕಾರ್ಯಕ್ರಮದ ಮಾಹಿತಿ ಹಾಗೂ ಆಮಂತ್ರಣ ನೀಡಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬಿಲ್ಲವ ಮಹಿಳಾ ಗ್ರಾಮ ಸಮಿತಿ ಅಧ್ಯಕ್ಷರಾದ ಪವಿತ್ರ ಎಲಿಯ ಸಭೆಗೆ ಮಾಹಿತಿ ನೀಡಿದರು.
SSLC ಹಾಗೂ ದ್ವೀತಿಯ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಓರ್ವ ವಿದ್ಯಾರ್ಥಿನಿಯ ಕಲಿಕಾ ಶುಲ್ಕವನ್ನು ವಿತರಿಸಲಾಯಿತು. ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ 26 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯನ್ನು ನಡೆಸಲಾಯಿತು.
ಗ್ರಾಮ ಸಮಿತಿಯ ಕಾರ್ಯದರ್ಶಿ ಚಂದ್ರಶೇಖರ ಕಾರೆದಕೋಡಿ ವರದಿ ವಾಚಿಸಿ, ಪವಿತ್ರ ಎಲಿಯ ವಂದಿಸಿದರು. ಗ್ರಾಮ ಸಮಿತಿಯ ಉಪಾಧ್ಯಕ್ಷರಾದ ಸದಾಶಿವ ಬಂಗೇರ ಎಲಿಯ, ಕೋಶಾಧಿಕಾರಿ ಲೋಕೇಶ್ ಪುಳಿತ್ತಡಿ, ಮಾಜಿ ಅಧ್ಯಕ್ಷರಾದ ಶಿವಚಂದ್ರ ನಿಡ್ಡೆಂಕಿ, ಲಕ್ಷ್ಮೀಶ ನಿಡ್ಡೆಂಕಿ, ಪ್ರಮುಖರಾದ ಯೋಗಾನಂದ ಬೇರಿಕೆ, ಪುನೀತ್ ದಾಸರಮೂಲೆ, ಸುಪ್ರೀತ್ ಬೇರಿಕೆ ಮತ್ತಿತರರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.