ಬಿಲ್ಲವ ಮಹಿಳಾ ವೇದಿಕೆಯ ಮಹಾಸಭೆ- ಆಟಿಡೊಂಜಿ ಕೂಟ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಪುತ್ತೂರು ತಾಲೂಕು ಬಿಲ್ಲವ ಮಹಿಳಾ ವೇದಿಕೆಯ ವಾರ್ಷಿಕ ಮಹಾಸಭೆ ಜು. 2ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಭಾಭವನದಲ್ಲಿ ಅಧ್ಯಕ್ಷೆ ಚಂದ್ರಕಲಾ ಮುಕ್ವೆರವರ ಅಧ್ಯಕ್ಷತೆಯಲ್ಲಿ ನಡೆಯಿತು.

 

ಮಹಿಳಾ ವೇದಿಕೆಯ ವತಿಯಿಂದ ಜು.31ರಂದು ನಡೆಯುವ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಸಭೆಯಲ್ಲಿ ಬಿಲ್ಲವ ಸಂಘದ ಉಪಾಧ್ಯಕ್ಷ ಡಾ. ಸದಾನಂದ ಕುಂದರ್ ಬಿಡುಗಡೆಗೊಳಿಸಿದರು. ಮಹಿಳಾ ವೇದಿಕೆಯು ಬಿಲ್ಲವ ಸಂಘದ ಅವಿಭಾಜ್ಯ ಅಂಗವಾಗಿದೆ. ಎಲ್ಲಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಆಟಿಕೂಟಕ್ಕೆ ಬಿಲ್ಲವ ಸಂಘದ ಸಂಪೂರ್ಣ ಸಹಕಾರ ಇದೆ ಎಂದು ಅವರು ಹೇಳಿದರು. ಬಿಲ್ಲವ ಸಂಘದ ಕೋಶಾಧಿಕಾರಿ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ಮಾತನಾಡಿ ಬಿಲ್ಲವ ಮಹಿಳಾ ವೇದಿಕೆಯ ಆಟಿಕೂಟ ಎಂದರೆ ಅದಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ಇದಕ್ಕೆ ನಮ್ಮ ಸಹಕಾರ ಯಾವಾಗಲೂ ಇದೆ ಎಂದರು. ಗುರುಮಂದಿರದ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿರವರು ಆಟಿಕೂಟಕ್ಕೆ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು. ಮಹಿಳಾ ವೇದಿಕೆ ಸಂಚಾಲಕಿ ವಿಶಾಲಾಕ್ಷಿ ಬನ್ನೂರುರವರು ಸ್ವಾಗತಿಸಿ, ಗ್ರಾಮ ಸಮಿತಿಯವರಿಂದ ಹೆಚ್ಚಿನ ಸಹಕಾರ ಕೋರಿದರು. ಕಾರ್ಯದರ್ಶಿ ವಿಮಲ ಸುರೇಶ್ ಸಂಘದ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಯಶೋದಾ ಪದ್ಮನಾಭ ಲೆಕ್ಕಪತ್ರ ಮಂಡಿಸಿದರು. ಸುಜಯ ಗಂಗಾಧರ್ ಪ್ರಾರ್ಥಿಸಿದರು. ನೆಲ್ಯಾಡಿ ವಲಯ ಸಂಚಾಲಕಿ ಉಷಾ ಅಂZನ್ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಜಯಲತಾ ವಂದಿಸಿದರು.

LEAVE A REPLY

Please enter your comment!
Please enter your name here