ನೆಲ್ಯಾಡಿ: ಇಲ್ಲಿನ ಎಲೈಟ್ ರಬ್ಬರ್ ಇಂಡಸ್ಟ್ರೀಸ್ ಮಾಲಕ, ಉದ್ಯಮಿ, ಕೊಡುಗೈ ದಾನಿ, ನೆಲ್ಯಾಡಿ ಉನ್ನುಕಲ್ಲಿಂಗಲ್ ನಿವಾಸಿ ಯು.ಪಿ.ವರ್ಗೀಸ್(80ವ.)ರವರು ಜು.4ರಂದು ಸಂಜೆ ಮಂಗಳೂರಿನ ಮಂಗಳಾ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ನಾಲ್ಕೈದು ತಿಂಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಯು.ಪಿ.ವರ್ಗೀಸ್ರವರು ಚಿಕಿತ್ಸೆ ಪಡೆದುಕೊಂಡು ತುಸು ಚೇತರಿಸಿಕೊಂಡ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಜು.೩ರಂದು ಸಂಜೆ ಮತ್ತೆ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಮಂಗಳಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಜು.೪ರಂದು ಸಂಜೆ ೩.೩೦ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಅನ್ನಮ್ಮ, ಪುತ್ರರಾದ ಶಾಜಿ, ಸೈಬು, ಸೈಜು, ಪುತ್ರಿಯರಾದ ಎಲಿನಾ, ಶೈಬಿಯವರನ್ನು ಅಗಲಿದ್ದಾರೆ.
ನಾಳೆ ಅಂತ್ಯಕ್ರಿಯೆ:
ಯು.ಪಿ.ವರ್ಗೀಸ್ರವರ ಮೃತದೇಹ ಜು.೪ರಂದು ರಾತ್ರಿ ನೆಲ್ಯಾಡಿಯ ಮನೆಗೆ ಬರಲಿದೆ. ಜು.೫ರಂದು ಬೆಳಿಗ್ಗೆ ೧೦ ಗಂಟೆಗೆ ಮನೆಯಲ್ಲಿ ಅಂತಿಮ ವಿಧಿ ವಿಧಾನದ ಬಳಿಕ ನೆಲ್ಯಾಡಿ ಸೈಂಟ್ ಜೋಸೆಫ್ ಮಲಂಕರ ಕ್ಯಾಥೋಲಿಕ್ ಚರ್ಚ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಪುತ್ರ ಶಾಜಿ ಯು.ವಿ.ತಿಳಿಸಿದ್ದಾರೆ.