ಪುತ್ತೂರು: ಕೋವಿಡ್ನಿಂದ ಮೃತಪಟ್ಟ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಇಬ್ಬರು ರೈತರಿಗೆ ಎಸ್ಸಿಡಿಸಿಸಿ ಬ್ಯಾಂಕ್ನಿಂದ ನೀಡಲ್ಪಟ್ಟ ಕೋವಿಡ್ ಪರಿಹಾರ ಧನವನ್ನು ಜು.೪ರಂದು ಬೊಳುವಾರಿನಲ್ಲಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ವಿತರಿಸಲಾಯಿತು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಬೆಳೆ ಸಾಲ ಪಡೆದು ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಮರಣ ಹೊಂದಿರುವ ರೈತರ ಕುಟುಂಬಕ್ಕೆ ನಿರ್ದಿಷ್ಟ ಪರಿಹಾರ ಮೊತ್ತ ಬಿಡುಗಡೆ ಮಾಡಿದ್ದು ಅದರಂತೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಬೆಳೆ ಸಾಲ ಪಡೆದ ರೈತರ ಪೈಕಿ ಇಬ್ಬರು ರೈತರು ಕೋವಿಡ್ನಿಂದ ಮೃತಪಟ್ಟಿದ್ದರು. ಮೃತ ಕುಟುಂಬದವರಿಗೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿತರಿಸಿದರು. ಸಂಘದ ಉಪಾಧ್ಯಕ್ಷ ರಾಜಶೇಖರ್ ಜೈನ್, ನಿರ್ದೇಶಕರುಗಳಾದ ಸುಭಾಶ್ ನಾಯಕ್, ಸುಂದರ ಪೂಜಾರಿ ಬಡಾವು, ಜಯಲಕ್ಷ್ಮಿ ಸುರೇಶ್ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ವಸಂತ, ಬ್ಯಾಂಕ್ನ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್, ವ್ಯವಸ್ಥಾಪಕಿ ರಾಧಾ ಬಿ.ರೈ ಉಪಸ್ಥಿತರಿದ್ದರು.
ರಾಜೇಂದ್ರ ಕುಮಾರ್ರವರಿಗೆ ಕೃತಜ್ಞತೆ ಸಲ್ಲಿಸಿದ ಬನ್ನೂರು ರೈತರ ಸೇ.ಸ.ಸಂಘ
ಬೆಳೆ ಸಾಲ ಪಡೆದ ರೈತರ ಪೈಕಿ ಕೋವಿಡ್ನಿಂದ ಮೃತಪಟ್ಟ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಇಬ್ಬರು ರೈತ ಕುಟುಂಬಕ್ಕೆ ಪರಿಹಾರ ಮೊತ್ತ ಬಿಡುಗಡೆ ಮಾಡಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮತ್ತು ಎಲ್ಲಾ ನಿರ್ದೇಶಕರಿಗೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಎಲ್ಲಾ ಸದಸ್ಯರು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತಿಳಿಸಿದರು.