ಕುಡ್ತಮುಗೇರಿನಲ್ಲಿ ರಸ್ತೆ ಜಲಾವೃತ : ವಾಹನ ಸಂಚಾರ ಅಸ್ತವ್ಯಸ್ತ

0

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ಜು. 5 ರಂದು ನಡೆದಿದೆ‌. ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ.

ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ‌. ಇದೀಗ ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರೀಕರು ಕಾವಲು ಕಾಯುತ್ತಿದ್ದು ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಮಳೆ ಕಡಿಮೆಯಾಗದಿದ್ದಲ್ಲಿ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here