ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

0

ಪುತ್ತೂರು: ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡ ಪುತ್ತೂರು ವಲಯದ ನೂತನ  ಕ್ಷೇತ್ರ ಶಿಕ್ಷಣಾಧಿಕಾರಿ  ಲೋಕೇಶ್ ಎಸ್.ಆರ್ ರವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಜು.5ರಂದು ಭೇಟಿ ನೀಡಿ, ಶಿಕ್ಷಣ ಇಲಾಖೆಗೆ ಈ ಹಿಂದೆ ದೊರೆತ ಸಹಕಾರ ಮುಂದೆಯೂ ದೊರೆಯಲಿ ಎಂದು ಆಶಿಸಿದರು.

ಪುತ್ತೂರು ತಾಲೂಕಿಗೆ ವರ್ಗಾವಣೆಗೊಂಡು ಆಗಮಿಸಿದ ಬಳಿಕ ಈ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಭೇಟಿ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಭೇಟಿಯೊಂದಿಗೆ ಆರಂಭಿಸಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಿದರು ಹಾಗೂ ಶಾಲಾ ಶೈಕ್ಷಣಿಕ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ ಹಾಗೂ ಹಿರಿಯ ಶಿಕ್ಷಕರೊಂದಿಗೆ ವಿಚಾರ ವಿನಿಮಯ ನಡೆಸಿದರು. ಈ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ಚೇತರಿಕೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಗೆ ಒತ್ತು ನೀಡುವಂತೆ ಸೂಚಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶಿವಪ್ರಕಾಶ್.ಎಂ ಮತ್ತು ಸಂಚಾಲಕ ರವಿನಾರಾಯಣ.ಎಂ ಉಪಸ್ಥಿತರಿದ್ದು, ಶಿಕ್ಷಣಾಧಿಕಾರಿಗಳಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here