ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಲ್ಲಡ್ಕ – ಕಾಂಞಂಗಾಡು ಹೆದ್ದಾರಿಯ ಕೇರಳ – ಕರ್ನಾಟಕ ಗಡಿಪ್ರದೇಶವಾದ ಸಾರಡ್ಕ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಪರಿಣಾಮ ಬೈಕ್ ಸವಾರನೋರ್ವ ಅಪಾಯದಿಂದ ಪಾರಾದ ಘಟನೆ ಜು.5ರಂದು ನಡೆದಿದೆ.
ರಸ್ತೆಗೆ ಗುಡ್ಡ ಕುಸಿದ ಪರಿಣಾಮ ಆ ದಾರಿಯಿಂದ ಸಾಗುತ್ತಿದ್ದ ದ್ವಿಚಕ್ರ ವಾಹನ ಜಖಂಗೊಂಡಿದ್ದು, ಮಣ್ಣು ಬಿದ್ದ ಪರಿಣಾಮ ರಸ್ತೆ ಬಂದ್ ಆಗಿದ್ದು, ವಾಹನ ಸಂಚಾರ ನಿಲುಗಡೆಯಾಗಿದೆ. ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ಕಾಸರಗೋಡು – ವಿಟ್ಲ ಮದ್ಯೆ ಸಂಪರ್ಕ ಕಡಿತಗೊಂಡಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.