ಪುತ್ತೂರು: ಇತ್ತೀಚೆಗೆ ನಿವೃತ್ತಿ ಹೊಂದಿದ ನರಿಮೊಗರು ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಪರೀಕ್ಷಕ ರಾಮಚಂದ್ರ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನರಿಮೊಗರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಪ್ರಭು, ಕಾರ್ಯದರ್ಶಿ ಡಿ ಕೃಷ್ಣರಾಜ್, ವಿಸ್ತರಣಾಧಿಕಾರಿ ನಾಗೇಶ್ ಕೆ, ನರಿಮೊಗರು ಸಿ.ಎ ಬ್ಯಾಂಕ್ ಅಧ್ಯಕ್ಷ ಬಾಬು ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಎಚ್ ಹಾಗೂ ಹಾಲು ಉ.ಸ.ಸಂಘದ ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.