ಪುತ್ತೂರು: ಒಳಮೊಗ್ರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಜು.4ರಂದು ಕುಂಬ್ರದ ನ್ಯೂಫ್ಯಾಮಿಲಿ ಕಾಂಪ್ಲೆಕ್ಸ್ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಎಂ ಬಿ ವಿಶ್ವನಾಥ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಲಾಕ್ ಅಧ್ಯಕ್ಷರು ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ಪ್ರತೀ ಬೂತ್ಗಳಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಇದಕ್ಕಾಗಿ ಪ್ರತೀ ಬೂತ್ಗಳನ್ನು ಸಜ್ಜುಗೊಳಿಸುವುದು ಮತ್ತು ಕಾರ್ಯಕರ್ತರನ್ನು ಒಟ್ಟುಗೂಡಿಸಿ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕಿದೆ. ಕಳೆದ ಗ್ರಾಪಂ ಚುನಾವಣೆಯಲ್ಲಿ ಒಳಮೊಗ್ರು ಗ್ರಾಮದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿದ್ದು ಒಳಮೊಗ್ರು ಗ್ರಾಮದಲ್ಲಿ ಪಕ್ಷ ಬಲಿಷ್ಟವಾಗಿದೆ ಮತ್ತು ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ಆಗಸ್ಟ್ ತಿಂಗಳಲ್ಲಿ ಬೂತ್ ಸಮಾವೇಶಕ್ಕೆ ಸಿದ್ದರಾಗುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.
ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ ಮಾತನಾಡಿ ವಲಯದ ಪ್ರತೀ ಬೂತ್ಗಳಲ್ಲಿಯೂ ಕಾರ್ಯಕರ್ತರ ತಂಡವನ್ನು ರಚನೆ ಮಾಡುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲಾಗುವುದು. ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗೆ ಈಗಿನಿಂದಲೇ ಸಿದ್ದತೆಯನ್ನು ಮಾಡಿಕೊಳ್ಳಬೇಕಾಗಿದ್ದು ಕಾರ್ಯಕರ್ತರು ಸಹಕಾರ ನೀಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ, ಸಲಾಮುದ್ದೀನ್ ಕುಂಬ್ರ, ಗ್ರಾಪಂ ಸದಸ್ಯೆ ಚಿತ್ರಾ ಬಿ ಸಿ, ಬ್ಲಾಕ್ ಉಪಾಧ್ಯಕ್ಷ ಶಶಿಕಿರಣ್ ರೈ ನೂಜಿಬೈಲು, ರಕ್ಷಿತ್ ರೈ ಮುಗೇರು, ಸಂತೋಷ್ಭಂಡಾರಿ ಚಿಲ್ಮೆತ್ತಾರು, ಮಹಮ್ಮದ್ ಬೊಳ್ಳಾಡಿ, ಮುಝಮ್ಮಿಲ್ ಶಾಂತಿನಡಿ ಮೊದಲಾದವರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.