ಪುತ್ತೂರು; ನಾಗದೋಷ ಪರಿಹಾರಕ್ಕಾಗಿ ಆಶ್ಲೇಷ ಬಲಿ ಪೂಜಾ ಸೇವೆ ನಡೆಸಲು ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶೇಷ ಸೌಲಭ್ಯ ಕಲ್ಪಸಿರುವ ಮುಂಡೂರು ಗ್ರಾಮದ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದಲ್ಲಿ ಎರಡನೇ ಹಂತದ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಜು.5 ರಂದು ನಡೆಯಿತು.
ಅರ್ಚಕ ನಾಗೇಶ್ ಕುದ್ರೆತ್ತಾಯರವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿತು. ಬೆಳಿಗ್ಗೆ ಸಾಮೂಹಿಕ ಸಂಕಲ್ಪ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರೆ ಹಾಗೂ ಅನ್ನಸಂತರ್ಪಣೆ ನಡೆಯಿತು.