ನೆಲ್ಯಾಡಿ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪಟ್ಲಡ್ಕ ಶ್ರೀ ಆದಿಮೊಗೇರ್ಕಳ ಸ್ವಾಮಿ ಕೊರಗಜ್ಜ ದೈವಸ್ಥಾನದ ಕಂಪೌಂಡ್ನ ಒಂದು ಭಾಗ ಜು.5ರಂದು ಬೆಳಿಗ್ಗೆ ಕುಸಿದು ಬಿದ್ದಿದೆ.
ಮೂರು ವರ್ಷದ ಹಿಂದೆ ದೈವಸ್ಥಾನದ ಜೀರ್ಣೋದ್ದಾರದ ಸಂದರ್ಭದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಸುಮಾರು 20 ಅಡಿ ಎತ್ತರದ ಕಂಪೌಂಡ್ ನಿರ್ಮಿಸಲಾಗಿತ್ತು. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಈ ಕಂಪೌಂಡ್ನ ಒಂದು ಬದಿ ಸಂಪೂರ್ಣ ಕುಸಿದು ಬಿದ್ದಿದೆ. ಇದರಿಂದಾಗಿ ಸುಮಾರು 7 ರಿಂದ 8 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಕಂಪೌಂಡ್ನ ಕಲ್ಲು, ಮಣ್ಣು ಕುಸಿದು ರಸ್ತೆಗೆ ಬಿದ್ದು ರಸ್ತೆ ಬ್ಲಾಕ್ ಆಗಿತ್ತು. ಗ್ರಾಮಸ್ಥರು ಹಾಗೂ ಭಕ್ತಾದಿಗಳು ಸೇರಿಕೊಂಡು ರಸ್ತೆಗೆ ಬಿದ್ದ ಮಣ್ಣು ತೆರವುಗೊಳಿಸಿದ್ದಾರೆ.