ವಿಟ್ಲ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕೊಡಾಜೆಯಲ್ಲಿ ನಡೆದಿದೆ. ಮೊಹಮ್ಮದ್ ರವರ ಪುತ್ರ ಅಬ್ಧುಲ್ ನಝೀರ್(19ವ.) ಮೃತ ದುರ್ದೈವಿ. ನಝೀರ್ ಜು.6ರಂದು ಸಂಜೆ ಕೊಡಾಜೆಯ ಫ್ಲ್ಯಾಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಬುಡೋಳಿ ನಿವಾಸಿಯಾಗಿದ್ದ ಇವರು ಕೊಡಾಜೆಯಲ್ಲಿ ಇತ್ತೀಚಿನಿಂದ ವಾಸಿಸುತ್ತಿದ್ದರು. ಉಪ್ಪಳದಲ್ಲಿ ಕೆಲಸದಲ್ಲಿದ್ದ ಇವರು ಎರಡು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದು ಕೊಠಡಿಗೆ ಬೀಗ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.