ಪುತ್ತೂರು:ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದಲ್ಲಿ ಶ್ರೀಕೃಷ್ಣ ಉಪಾಧ್ಯಾಯರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಹರುನಗರ ಮುರ ನಿವಾಸಿ ಅಶ್ರಫ್ ಕಲ್ಲೇಗ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.ಪುತ್ತೂರಿನ ದರ್ಬೆ ವೃತ್ತದ ಬಳಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶ್ರೀ ಕೃಷ್ಣ ಉಪಾಧ್ಯಾಯ ಕಲ್ಲಡ್ಕ ಎಂಬುವರು ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದು ಈ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದರು.ಅದರಂತೆ ಕಲಂ: 505(2) ಜೊತೆಗೆ 34 ಐಪಿಸಿಯಡಿ ಶ್ರೀಕೃಷ್ಣ ಉಪಾಧ್ಯಾಯರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.