ವಿಟ್ಲ: ಅಂಗಡಿ ಮುಂಭಾಗದಲ್ಲಿ ನೀರು ಹರಿದು ಸಮಸ್ಯೆ ಸೃಷ್ಟಿ

0

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಟ್ಲ-ಪುತ್ತೂರು ರಸ್ತೆಯ ಕಟ್ಟಡದಲ್ಲಿರುವ ಅಂಗಡಿಗಳ ಹೊರಾಂಗಣಕ್ಕೆ ನೀರು ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಟ್ಲ-ಪುತ್ತೂರು ರಸ್ತೆಯ ಸಿ.ಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಕಟ್ಟಡದ ಹೊರಂಗಣದಲ್ಲಿ ನೀರು ಹರಿದು ಗ್ರಾಹಕರು ಮತ್ತು ಅಂಗಡಿ ಮಾಲಕರು ತೊಂದರೆ ಅನುಭವಿಸಿದರು. ನೀರು ಸರಿಯಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೇ ಈ ರೀತಿಯ ಪರಿಸ್ಥಿತಿ ನಿರ್ಮಾಣ ಗೊಂಡಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here