ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಿಂದ ಪಿಯುಸಿ ಸಾಧಕರಿಗೆ ಜಿ.ಎಲ್ ಮೆರಿಟೋರಿಯಸ್ ಸ್ಟೂಡೆಂಟ್ ಅವಾರ್ಡ್ 

0

ಜು.9ರಂದು ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಶಸ್ತಿ ಪ್ರದಾನ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿ.ಎಲ್ ಮೆರಿಟೋರಿಯಲ್ ಸ್ಟೂಡೆಂಟ್ ಅವಾರ್ಡ್ ನೀಡಲು ಮುಂದಾಗಿದ್ದು ಜು.9ರಂದು ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ನಗರದ ಆರು ಪದವಿ ಪೂರ್ವ ಕಾಲೇಜುಗಳಲ್ಲಿ 2021-22ನೇ ಸಾಲಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಹಾಗೂ ಪದಕ ನೀಡಿ ಗೌರವಿಸಲಾಗುವುದು.

ಕಾರ್ಯಕ್ರಮದಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಪಾಲ ವರದರಾಜ ಚಂದ್ರಗಿರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ| ಮಹೇಶ್ ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here