ಪುತ್ತೂರು:ಕಲಿಯುಗ ಕಲೆ,ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಜು.10ರಂದು ಮಧ್ಯಾಹ್ನ 12 ಗಂಟೆಗೆ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ ನಡೆಯಲಿದೆ.ಆಗಮಿಸುವ ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.
ಮಾನೆಚ್ಚಿಲ್,ಅಗೇಲು ಸೇವೆ: ಜು.8ರಂದು ಮಧ್ಯಾಹ್ನ ಕ್ಷೇತ್ರದಲ್ಲಿ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ,ಅಗೇಲು ಸೇವೆ ನಡೆಯಿತು.ಆಗಮಿಸಿದ್ದ ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಪ್ರಸಾದ ವಿತರಣೆ ನಡೆಯಿತು.
ಕ್ಷೇತ್ರದಲ್ಲಿ ಪ್ರತಿ ತಿಂಗಳ ಸಂಕ್ರಮಣದಂದು ರಾತ್ರಿ ಸ್ವಾಮಿ ಕೊರಗಜ್ಜ,ಅಗ್ನಿ ಕಲ್ಲುರ್ಟಿ ದೈವಗಳ ಕೋಲ,ಅಗೇಲು ಸೇವೆ ನಡೆಯುತ್ತದೆ. ಪ್ರತಿ ಆದಿತ್ಯವಾರ ಮಧ್ಯಾಹ್ನ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ, ಪ್ರತಿ ಮಂಗಳವಾರ, ಶುಕ್ರವಾರ ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ ನಡೆಯುತ್ತದೆ.ಈ ಎಲ್ಲಾ ದಿನಗಳಲ್ಲಿಯೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.ಪ್ರತಿ ಸೋಮವಾರ ಮತ್ತು ಶನಿವಾರ ಪ್ರಶ್ನಾ ಚಿಂತನೆಯೂ ನಡೆಯುತ್ತದೆ ಎಂದವರು ತಿಳಿಸಿದ್ದಾರೆ.