ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ. ಕಾರ್ಯದರ್ಶಿಯಾಗಿ ನಿಯೋಜನೆಗೊಂಡಿರುವ ಸತೀಶ್ ಬಂಗೇರ ಅವರು ಜು.8ರಂದು ಕರ್ತವ್ಯಕ್ಕೆ ಹಾಜರಾಗಿದ್ದು, ಗ್ರಾ.ಪಂ. ವತಿಯಿಂದ ಅವರನ್ನು ಸ್ವಾಗತಿಸಲಾಯಿತು. 34 ನೆಕ್ಕಿಲಾಡಿ ಗ್ರಾ.ಪಂ. ಕಾರ್ಯದರ್ಶಿಯಾಗಿದ್ದ ಕುಮಾರಯ್ಯನವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಕೌಕ್ರೌಡಿ ಗ್ರಾ.ಪಂ. ಕಾರ್ಯದರ್ಶಿಯಾಗಿದ್ದ ಸತೀಶ್ ಬಂಗೇರ ಅವರನ್ನು ವರ್ಗಾವಣೆಗೊಳಿಸಲಾಗಿತ್ತು. ಇಲ್ಲಿ ಇವರು ಕಾರ್ಯದರ್ಶಿ ಹಾಗೂ ಪ್ರಭಾರ ಪಿಡಿಒವಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಇವರನ್ನು ಸ್ವಾಗತಿಸಿದ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ನೆಕ್ಕಿಲಾಡಿ, ಉಪಾಧ್ಯಕ್ಷೆ ಸ್ವಪ್ನ, ಸದಸ್ಯರಾದ ಗೀತಾ ವಾಸುಗೌಡ, ರತ್ನಾವತಿ, ಗ್ರಾ.ಪಂ. ಸಿಬ್ಬಂದಿಗಳಾದ ಸುಶೀಲಾ, ವಸಂತಿ, ಸಾರಿಕಾ, ಯಶೋಧಾ, ನಿತಿನ್ ಉಪಸ್ಥಿತರಿದ್ದರು.