ಪುತ್ತೂರು:ಪ್ರತಿಷ್ಠಿತ ಐಎಂಎ ಕೆ.ಎಸ್.ಬಿ ಡಾಕ್ಟರ್ಸ್ ಡೇ ಪ್ರಶಸ್ತಿ ಪುರಸ್ಕೃತರಾಗಿರುವ ವೈದ್ಯಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಡಾ.ಎಂ.ಕೆ.ಪ್ರಸಾದ್ ಅವರಿಗೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ ಮತ್ತು ನಗರಸಭಾ ಸ್ಥಳೀಯ ಸದಸ್ಯ ಕೆ.ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಜು.10ರಂದು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸನ್ಮಾನ ಕಾರ್ಯಕ್ರಮವು ಬೊಳುವಾರು ವಿರೂಪಾಕ್ಷನಗರ, ಪಾಟಲೀಪುತ್ರ ರಸ್ತೆ ನಿವಾಸಿ ಡಾ.ಎಂ.ಕೆ.ಪ್ರಸಾದ್ ಅವರ ನಿವಾಸದಲ್ಲಿ ನಡೆಯಲಿದ್ದು, ವಾರ್ಡ್-15ರ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.