ಪುತ್ತೂರು: ಬಪ್ಪಳಿಗೆ ಸಮೀಪ ಸ್ಕೂಟರ್ ಮತ್ತು ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಜು.9 ರಂದು ಪುತ್ತೂರು ಬಲ್ನಾಡು ರಸ್ತೆಯ ಬಪ್ಪಳಿಗೆಯಲ್ಲಿ ನಡೆದಿದೆ.
ಪುತ್ತೂರಿನಿಂದ ಬಲ್ನಾಡಿಗೆ ಹೋಗುತ್ತಿದ್ದ ಸ್ಕೂಟರ್ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ್ದು ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ. ಅದೇ ದಾರಿಯಾಗಿ ಬಂದ ರಿಕ್ಷಾವೂ ಅಪಘಾತದ ತೀವ್ರತೆಗೆ ರಸ್ತೆ ಬದಿಗೆ ಹೋಗಿ ನಿಂತ ಘಟನೆಯೂ ನಡೆದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್.ಐ ರಾಮ ನಾಯ್ಕ ಅವರು ಭೇಟಿ ನೀಡಿ ಮಾಹಿತಿ ಪಡೆದು ಕೊಂಡಿದ್ದಾರೆ.