ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾಗಿ ಅಬ್ರಹಾಂ ಎಸ್.ಎ ಅವಿರೋಧವಾಗಿ ಪುನರಾಯ್ಕೆ

0

ಪುತ್ತೂರು:ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಪುತ್ತೂರು ಘಟಕದ 2022-27ನೇ ಸಾಲಿನ ಅಧ್ಯಕ್ಷರಾಗಿ ನೆಲ್ಲಿಕಟ್ಟೆ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರೌಢ ಶಾಲಾ ಹಿಂದಿ ಶಿಕ್ಷಕ ಅಬ್ರಹಾಂ ಎಸ್.ಎರವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

 

 


ಉಪಾಧ್ಯಕ್ಷರಾಗಿ ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಶ್ಯಾಮಲಾ ಎಂ., ರಾಜ್ಯಪರಿಷತ್ ಸದಸ್ಯರಾಗಿ ಕೆಯ್ಯೂರು ಕೆಪಿಎಸ್‌ನ ವಿಜ್ಞಾನ ಶಿಕ್ಷಕ ಕೆ.ಎಸ್ ವಿನೋದ್ ಕುಮಾರ್, ಕಾರ್ಯದರ್ಶಿಯಾಗಿ ಉಪ್ಪಿನಂಗಡಿ ಸ.ಪ.ಪೂ ಕಾಲೇಜಿನ ಆಂಗ್ಲ ಭಾಷಾ ಶಿಕ್ಷಕ ವಿಜಯ ಕುಮಾರ್ ನಾಯ್ಕ, ಜತೆ ಕಾರ್ಯದರ್ಶಿಯಾಗಿ ಹಿರೇಬಂಡಾಡಿ ಸರಕಾರಿ ಪ್ರೌಢ ಶಾಲಾ ಗಣಿತ ಶಿಕ್ಷಕ ಹರಿಕಿರಣ್ ಕೆ., ಕೋಶಾಧಿಕಾರಿಯಾಗಿ ಕುಂಬ್ರ ಕೆ.ಪಿ.ಎಸ್‌ನ ಗಣಿತ ಶಿಕ್ಷಕಿ ಮಮತಾ ಕೆ.ಎಸ್., ಸಂಘಟನಾ ಕಾರ್ಯದರ್ಶಿಯಾಗಿ ಹಿರೇಬಂಡಾಡಿ ಸರಕಾರಿ ಪ್ರೌಢ ಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಲಲಿತಾ ಕೆ.ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇರ್ದೆ-ಉಪ್ಪಳಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. ಚುನಾವಣಾಧಿಕಾರಿಯಾಗಿದ್ದರು.

LEAVE A REPLY

Please enter your comment!
Please enter your name here