ಕೆಮ್ಮಾಯಿ: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜು.10ರಂದು ಬೆಳಿಗ್ಗೆ 9.ಕ್ಕೆ ಶ್ರೀಸುಬ್ರಹ್ಮಣ್ಯ ಮಠಾಧೀಶ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ ನಡೆಯಿತು.
ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಪತಿ ಬೈಪಾಡಿತ್ತಾಯ, ಶ್ರೀಧರ ಬೈಪಾಡಿತ್ತಾಯರವರು ಸ್ವಾಮೀಜಿಯವರನ್ನು ಸ್ವಾಗತಿಸಿದರು. ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸುಮಾರು ೩೫೦ಕ್ಕೂ ಮಿಕ್ಕಿ ಭಕ್ತಾದಿಗಳು ಮುದ್ರಾಧಾರಣೆ ಹಾಕಿಸಿದರು. ಮಹಿಳಾ ಭಕ್ತಾಧಿಗಳಿಂದ ಶ್ರೀವಿಷ್ಣುಸಹಸ್ರನಾಮ ಪಠಣ ದೇವಸ್ಥಾನದಲ್ಲಿ ನಡೆಯಿತು. ದೇವಾಲಯದ ಆಡಳಿತ ಸಮಿತಿ ಸದಸ್ಯರು, ಶ್ರೀಮಹಾವಿಷ್ಣು ಭಜನಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.