ಒಡಿಯೂರು ಗ್ರಾಮ ವಿಕಾಸ,  ಗುರುದೇವ ಸೇವಾ ಬಳಗ,  ವಜ್ರಮಾತ ಮಹಿಳಾ ವಿಕಾಸ ಕೇಂದ್ರ,  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಒಡಿಯೂರು ಶ್ರೀಗಳವರ ಜನ್ಮ ದಿನೋತ್ಸವದ ಪ್ರಯುಕ್ತ ನಡೆಯಲಿರುವ ಗ್ರಾಮೋತ್ಸವದ ನಿಟ್ಟಿನಲ್ಲಿ ಜು.10 ರಂದು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಒಡಿಯೂರು ಗ್ರಾಮ ವಿಕಾಸ,  ಗುರುದೇವ ಸೇವಾ ಬಳಗ,  ವಜ್ರಮಾತ ಮಹಿಳಾ ವಿಕಾಸ ಕೇಂದ್ರ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. 
ಮಹಾಲಿಂಗೇಶ್ವರ ದೇವಸ್ಥಾನ ಸಮಿತಿಯ ಸದಸ್ಯರಾದ ಐತ್ತಪ್ಪ ನಾಯ್ಕ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ,  ಕ್ರೀಡಾ ಸಂಚಾಲಕರಾದ ನಯನ ರೈ ಹಾಗು ಹರಿಣಾಕ್ಷಿ ಜೆ ಶೆಟ್ಟಿ, ಮೇಲ್ವಿಚಾರಕಿ ಸವಿತಾ ರೈ ಸಂಯೋಜಕರಾದ ಶಶಿ, ಸೇವಾ ದೀಕ್ಷಿತೆ ಸುಜಾತ, ಗುರುದೇವ ಸೇವಾ ಬಳಗದ ಜೊತೆ ಕಾರ್ಯದರ್ಶಿ ಭವಾನಿ ಶಂಕರ್, ಸಂಘಟನಾ ಕಾರ್ಯದರ್ಶಿ ಸುಧೀರ್ ನೊಂಡ, ಶೋಭಾ, ಪದ್ದು ಹಾಗೂ ಗ್ರಾಮ ವಿಕಾಸ ಯೋಜನೆಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here