ಪುತ್ತೂರು: ಅರಿಯಡ್ಕ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಿಸಲಾಯಿತು. ವಿಶೇಷ ನಮಾಜಿಗೆ ನೇತೃತ್ವ ನೀಡಿದ ಸ್ಥಳೀಯ ಖತೀಬ್ ಜಲೀಲ್ ಸಖಾಫಿ ಜಾಲ್ಸೂರು ಮಾತನಾಡಿ ತ್ಯಾಗದ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವು ಸಮಾಜದಲ್ಲಿ ಸ್ನೇಹ, ಸೌಹಾರ್ದತೆಯನ್ನು ಬೆಳೆಸಲು ಪ್ರೇರಣೆಯಾಗಲಿ ಎಂದು ಹೇಳಿದರು. ಅರಿಯಡ್ಕ ಜಮಾಅತ್ ಕಮಿಟಿ ಅಧ್ಯಕ್ಷ ಪಿ.ಎಂ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಹಾಗೂ ಜಮಾಅತರು ಉಪಸ್ಥಿತರಿದ್ದರು.