ನೆಲ್ಯಾಡಿ: ಆಲಂಕಾರು-ನೆಲ್ಯಾಡಿ ಪಿಡಬ್ಲ್ಯುಡಿ ರಸ್ತೆಯ ತೋಟ ಚೆಡವು ಎಂಬಲ್ಲಿ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಜು.10ರಂದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಮಣ್ಣು ಬಿದ್ದು ರಸ್ತೆ ಬಂದ್ ಆಗಿರುವ ಬಗ್ಗೆ ನೆಲ್ಯಾಡಿ ಗ್ರಾ.ಪಂ.ಸದಸ್ಯ ಆನಂದ ಗೌಡ ಪಿಲವೂರುರವರು ಲೋಕೋಪಯೋಗಿ ಇಲಾಖೆಯವರ ಗಮನಕ್ಕೆ ತಂದಿದ್ದರು. ಇಲಾಖೆ ವತಿಯಿಂದ ಗುತ್ತಿಗೆದಾರರ ಮೂಲಕ ಮಣ್ಣು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ.