ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಇಚ್ಚೂರು-ಕೊಪ್ಪ ಗ್ರಾ.ಪಂ.ರಸ್ತೆಯ ಕೊಪ್ಪ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ.
ಜು.9ರಂದು ರಾತ್ರಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಬಂದ್ ಆಗಿತ್ತು. ನೆಲ್ಯಾಡಿ ಗ್ರಾ.ಪಂ.ಸದಸ್ಯ ಆನಂದ ಗೌಡ ಪಿಲವೂರುರವರ ನೇತೃತ್ವದಲ್ಲಿ ರಸ್ತೆಗೆ ಬಿದ್ದ ಮಣ್ಣು ತೆರವುಗೊಳಿಸಲಾಗಿದೆ.