ಸೂರಿಕುಮೇರ್: ಗುಡ್ಡ ಕುಸಿದು ಹೆದ್ದಾರಿ ಬ್ಲಾಕ್

0

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರ್ ಎಂಬಲ್ಲಿ ಗುಡ್ಡ ಕುಸಿದು ಹೆದ್ದಾರಿಗೆ ಮಣ್ಣು ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.

ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸಲು ಯತ್ನಿಸುತ್ತಿದ್ದು, ಇದೀಗ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದ್ದು, ಅಲ್ಪ ಹೊತ್ತಿನಲ್ಲಿ ತೆರವು ಕಾರ್ಯಾಚರಣೆ ಸಂಪೂರ್ಣ ಗೊಳ್ಳುವ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here