ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಳೆನೇರೆಂಕಿ ಶಾಖಾ ಕಛೇರಿಯಾ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಜು.12 ರಂದು ಬೆಳಿಗ್ಗೆ 10:00 ಗಂಟೆಗೆ ಹಳೆನೇರೆಂಕಿಯಲ್ಲಿ ನಡೆಯಲಿದೆ. ಬಂದರು,ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ ಎಸ್ ರವರು ಶಿಲಾನ್ಯಾಸ ನೇರವೆರಿಸಲಿದ್ದಾರೆ. ಆಲಂಕಾರು ಸಿ.ಎ ಬ್ಯಾಂಕ್ ನ ಅಧ್ಯಕ್ಷರಾದ ಧರ್ಮಪಾಲ ರಾವ್ ಕಜೆ ಸಭಾಧ್ಯಕ್ಷತೆ ವಹಿಸಲಿದ್ದು ,ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು,ರಾಮಕುಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಯನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗು ಊರವರೆಲ್ಲರೂ ಭಾಗವಹಿಸುವಂತೆ ಸಂಘದ ಅಧ್ಯಕ್ಷರಾದ ಧರ್ಮಪಾಲ ರಾವ್ ಕಜೆ,ಉಪಾಧ್ಯಕ್ಷರಾದ ಪ್ರದೀಪ್ ರೈ ಮನವಳಿಕೆ ಹಾಗು ನಿರ್ದೇಶಕರು,ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರೈ.ಯಂ ಹಾಗು ಸಿಬ್ಬಂದಿವರ್ಗದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.