ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ, ಪದಾಧಿಕಾರಿಗಳ ನೇಮಕ

0

ಪುತ್ತೂರು : ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಜು.೧೦ರಂದು ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಶಿವಪ್ಪ ನಾಯ್ಕರ ಅಧ್ಯಕ್ಷತೆಯಲ್ಲಿ ನಡೆಯಿತು. 2022-23ನೇ ಸಾಲಿನ 36 ಸದಸ್ಯರ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಸುಂದರ ನಾಯ್ಕ ಕೆ.ರವರು ಆಯ್ಕೆ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷರಾಗಿ ರಾಮಚಂದ್ರ ನಾಯ್ಕ, ಉಪಾಧ್ಯಕ್ಷರಾಗಿ ಮಂಜುನಾಥ ನಾಯ್ಕ, ಕಾರ್ಯದರ್ಶಿಯಾಗಿ ಸಾವಿತ್ರಿ ಶೀನಪ್ಪ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಬಲ್ನಾಡು, ಕೋಶಾಧಿಕಾರಿಯಾಗಿ ಬಾಲಕೃಷ್ಣ ನಾಯ್ಕ, ಸಂಘಟನಾ ಕಾರ್ಯದರ್ಶಿಗಳಾಗಿ ಶ್ಯಾಮ್ ಶ್ರವಣ, ಪುಷ್ಪರಾಜ್, ರಾಮ ನಾಯ್ಕ, ವಿಶ್ವನಾಥ್ ನಾಯ್ಕ, ಸುಬ್ರಾಯ ನಾಯ್ಕ ಮತ್ತು ರಾಮ ನಾಯ್ಕ ಅವಿರೋಧವಾಗಿ ಆಯ್ಕೆಯಾದರು. ಡಾ.ಗೋವಿಂದ ನಾಯ್ಕರವರು ಚುನಾವಣಾಧಿಕಾರಿಯಾಗಿದ್ದರು.

LEAVE A REPLY

Please enter your comment!
Please enter your name here