ಪುತ್ತೂರು: ಮುಂಡೂರು ಗ್ರಾಮದ ಉದಯಗಿರಿ ಎಂಬಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ ಎರಡು ಮನೆಗೆ ಮಳೆ ನೀರು ನುಗ್ಗಿ ಸಮಸ್ಯೆಯುಂಟಾದ ಹಿನ್ನೆಲೆಯಲ್ಲಿ ಮುಂಡೂರು ಗ್ರಾ.ಪಂ ವತಿಯಿಂದ ಚರಂಡಿ ವ್ಯವಸ್ಥೆ ಸರಿಪಡಿಸಿ ಸಮಸ್ಯೆ ಪರಿಹರಿಸಲಾಯಿತು. ರೇವತಿ ಹಾಗೂ ಜಯಾನಂದ ನಾಯ್ಕರವರ ಮನೆ ಬಳಿ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣಕ್ಕೆ ಮಳೆ ನೀರು ಮನೆಯೊಳಗೆ ನುಗ್ಗಿತ್ತು.
ದುರಸ್ತಿ ಕಾರ್ಯ ನಡೆಸುವ ವೇಳೆ ಮುಂಡೂರು ಗ್ರಾ.ಪಂ ಪಿಡಿಓ ಗೀತಾ ಬಿ.ಎಸ್, ಸದಸ್ಯರಾದ ಉಮೇಶ್ ಗೌಡ ಅಂಬಟ, ಯಶೋಧ, ಗ್ರಾಮ ಕರಣಿಕರಾದ ತುಳಸಿ, ಗ್ರಾ.ಪಂ ಸಿಬ್ಬಂದಿ ಕೊರಗಪ್ಪ ನಾಯ್ಕ ಉಪಸ್ಥಿತರಿದ್ದರು.