ಬೆಟ್ಟಂಪಾಡಿ: ನಿಡ್ಪಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯವರ ಸ್ಥಳಾಂತರಿತ ಕಚೇರಿ ಮತ್ತು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವನ್ನು ಶಾಸಕ ಸಂಜೀವ ಮಠಂದೂರು ಜು. 11 ರಂದು ಉದ್ಘಾಟಿಸಿದರು.
ಇದೇ ವೇಳೆ ಕಂದಾಯ ಇಲಾಖೆಯಲ್ಲಿ 40 ವರ್ಷಗಳ ಕಾಲ ಗ್ರಾಮಸೇವಕರಾಗಿ ಕಾರ್ಯನಿರ್ವಹಿಸಿ ಇತ್ತೀಚೆಗೆ ನಿವೃತ್ತರಾದ ಕುಂಞಿಪ ಬ್ಯಾರಿಯವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಸರ್ಗಪ್ರಿಯ, ನಿಡ್ಪಳ್ಳಿ ಗ್ರಾ.ಪಂ. ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಸದಸ್ಯ ಮುರಳೀಕೃಷ್ಣ ಭಟ್ ಮುಂಡೂರು, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಗೌಡ ಪುಳಿತ್ತಡಿ, ಪ್ರಮುಖರಾದ ಪ್ರಕಾಶ್ ಬೋರ್ಕರ್, ಕರುಣಾಕರ ಶೆಟ್ಟಿ ಕೊಮ್ಮಂಡ, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದ ಮ್ಹಾಲಕ ಕಿರಣ್ ಕುಮಾರ್ ಕಾನ, ಸ್ಥಳೀಯ ಕಾರ್ಯಕರ್ತರು ಹಾಜರಿದ್ದರು.