ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಹೊಳೆಯಲ್ಲಿ ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ. ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದ್ದು, ಕೇಪು ಗ್ರಾಮದ ಕುಕ್ಕೆಬೆಟ್ಟು ನಿವಾಸಿ ಬಾಬು ನಾಯ್ಕ ರವರ ಮಗ ಕುಶಾಲಕ್ಷ(42 ವ.) ಎಂದು ಗುರುತಿಸಲಾಗಿದೆ. ಅವರು ಜು.11 ರಂದು ಮನೆಯಿಂದ ತೆರಳಿದವರು ಮತ್ತೆ ಮನೆಗೆ ಬಾರದೆ ನಾಪತ್ತೆಯಾಗಿದ್ದರು.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.