ಪುತ್ತೂರು ತಾ| ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆ : ಅಧ್ಯಕ್ಷರಾಗಿ ನವೀನ್ ಕುಮಾರ್ ರೈ ಕೆ., ಪ್ರ.ಕಾರ್ಯದರ್ಶಿಯಾಗಿ ನಾಗೇಶ್ ಪಾಟಾಳಿ ಕೆ.

0

ಪುತ್ತೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಇದರ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ, ಸರ್ವೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ನವೀನ್ ಕುಮಾರ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸೂರಂಬೈಲು ಶಾಲಾ ಸಹಶಿಕ್ಷಕ ನಾಗೇಶ್ ಪಾಟಾಳಿ ಕೆ. ಆಯ್ಕೆಯಾಗಿದ್ದಾರೆ.

ಲಕ್ಷ್ಮಣ ನಾಯ್ಕ ಅವರ ಸೇವಾ ನಿವೃತ್ತಿಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಂಘದ ನಿರ್ದೇಶನದಂತೆ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳು ಪುತ್ತೂರಿನ ಗುರುಭವನದಲ್ಲಿ ಜುಲೈ 11ರಂದು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂದರ್ಭ ಸರ್ವೆ ಹಿ.ಪ್ರಾ. ಶಾಲಾ ಶಿಕ್ಷಕ ನವೀನ್ ಕುಮಾರ್ ರೈ ಅವರನ್ನು ಮೊದಲ ಅವಧಿಯ ಅಧ್ಯಕ್ಷರಾಗಿ ಆಯ್ಕೆ ಮಾಡಿದರೆ, ಎರಡನೇ ಅವಧಿಗೆ ಅಂದರೆ 2024ರ ಜನವರಿ 1ರಿಂದ ಅನ್ವಯವಾಗುವಂತೆ ಸೂರಂಬೈಲು ಹಿ.ಪ್ರಾ. ಶಾಲಾ ಸಹಶಿಕ್ಷಕ ನಾಗೇಶ್ ಪಾಟಾಳಿ ಪೆರುವಾಯಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಜಿಲ್ಲಾ ಪ್ರ. ಕಾರ್ಯದರ್ಶಿಗಳಾದ ವಿಮಲ್ ನೆಲ್ಯಾಡಿ, ಉಪಾಧ್ಯಕ್ಷರಾದ ನವೀನ್ ಪಿ.ಎಸ್., ವಾಣಿ, ಕುಶಾಲಪ್ಪ ಸುಳ್ಯ, ಕೋಶಾಽಕಾರಿ ರಾಜೇಶ್ ನೆಲ್ಯಾಡಿ ಸಹಕರಿಸಿದರು. ಪುತ್ತೂರು ತಾಲೂಕು ಘಟಕದ ಚುನಾಯಿತ ಪ್ರತಿನಿಽಗಳಾದ ಶಾಂತಿ ಮೊರಾಸ್, ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ನಾಮ ನಿರ್ದೇಶಿತ ಸದಸ್ಯರಾದ ಶಶಿಕಾಂತ ಸಾಜ, ಬಾಬು ಕೆಯ್ಯೂರು ಉಪಸ್ಥಿತರಿದ್ದರು.

ಬಳಿಕ ಪುತ್ತೂರು ಘಟಕದ ಪದಾಧಿಕಾರಿಗಳನ್ನು ಪುತ್ತೂರು ತಾಲೂಕು ಅಧ್ಯಕ್ಷರಾಗಿ ಆಯ್ಕೆಗೊಂಡ ನವೀನ್ ಕುಮಾರ್ ರೈ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮುರ ಶಾಲೆಯ ಸುಧಾಕರ ರೈ, ಕೋಶಾಽಕಾರಿಯಾಗಿ ಕಬಕ ಶಾಲೆಯ ಸಹಶಿಕ್ಷಕಿ ಲತಾ ಕುಮಾರಿ, ಜೊತೆ ಕಾರ್ಯದರ್ಶಿಯಾಗಿ ಹಾರಾಡಿ ಶಾಲೆಯ ಗಂಗಾವತಿ ಪಿ. ರೈ, ಸಂಘಟನಾ ಕಾರ್ಯದರ್ಶಿಯಾಗಿ ಕೈಕಾರ ಶಾಲೆಯ ರಾಮಣ್ಣ ರೈ, ಉಪಸಂಘಟನಾ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಶಾಲೆಯ ಸಂತೋಷ್ ಕುಮಾರ್ ಆಯ್ಕೆಯಾದರು.

LEAVE A REPLY

Please enter your comment!
Please enter your name here