ಅಡ್ಯನಡ್ಕ: ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಯತ್ನ

0

ವಿಟ್ಲ: ಕುಡಿದ ಮತ್ತಿನಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಕಡಿದ ಘಟನೆ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ಜ. 12ರಂದು ನಡೆದಿದೆ.

ಘಟನೆಯಿಂದ ಕೊಲ್ಲಪದವು ನಿವಾಸಿ ದಿನೇಶ್ ಎಂಬವರು ಗಾಯಗೊಂಡವರಾಗಿದ್ದಾರೆ. ಮುಳಿಯ ನಿವಾಸಿ ಈಶ್ವರ ನಾಯ್ಕ್ ರವರು ಹಲ್ಲೆ ನಡೆಸಿದವರಾಗಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಇವರಿಬ್ಬರ ಮಧ್ಯೆ ಅಡ್ಯನಡ್ಕ ಪೇಟೆಯಲ್ಲಿ ಮಾತಿನ ಚಕಮಕಿ ನಡೆದಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಈಶ್ವರರವರು ತನ್ನ ಕೈಯ್ಯಲ್ಲಿದ್ದ ಕತ್ತಿಯಿಂದ ದಿನೇಶ್ ರವರಿಗೆ ಕಡಿದರೆನ್ನಲಾಗಿದೆ. ಘಟನೆಯಿಂದಾಗಿ ಗಂಭೀರ ಗಾಯಗೊಂಡಿದ್ದ ದಿನೇಶ್ ರವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here