ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ಇದರ ಪದಗ್ರಹಣ ಸಮಾರಂಭ ಜು.14ರಂದು ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲಾ ಉಪ ಗವರ್ನರ್ ಬಿ.ಎಂ ಭಾರತಿ ಅವರು ಪದ ಸ್ವೀಕಾರ ಸಮಾರಂಭ ನಡೆಸಿಕೊಡಲಿದ್ದಾರೆ.
ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹಮ್ಮದ್ ಕುಕ್ಕುವಳ್ಳಿ, ಕಾರ್ಯದರ್ಶಿಯಾಗಿ ಶ್ರೀಪ್ರಸಾದ್ ಪಾಣಾಜೆ ಹಾಗೂ ಕೋಶಾಧಿಕಾರಿಯಾಗಿ ಪ್ರಕಾಶ್ ರೈ ಬೈಲಾಡಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕ್ಲಬ್ನ ಸದಸ್ಯರು, ಲಯನ್ಸ್ ಬಂಧುಗಳು ಭಾಗವಹಿಸಲಿದ್ದಾರೆ ಎಂದು ನಿಕಟಪೂರ್ವ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ, ಕೋಶಾಽಕಾರಿ ಶಾಹುಲ್ ಹಮೀದ್ ಹಾಗೂ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ ತಿಳಿಸಿದ್ದಾರೆ.