ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ.
ಕಳೆದ ಒಂದು ವಾರದಿಂದ ದ.ಕ.ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.ಹಲವೆಡೆ ಮನೆಗಳು ಕುಸಿದಿದ್ದು, ಜೀವ ಹಾನಿ, ಆಸ್ತಿಪಾಸ್ತಿ ಹಾನಿ ಸಂಭವಿಸಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈಗಾಗಲೇ ದ.ಕ., ಉಡುಪಿ, ಕೊಡಗು, ಮಡಿಕೇರಿ ಸುತ್ತಮುತ್ತಲು ತೆರಳಿ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದ್ದಾರೆ.ಇದರ ಬೆನ್ನಲ್ಲೇ ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಎಸ್ಡಿಆರ್ ಎಫ್/ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ನಿಗದಿ ಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.